ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆಂಗಲ್ ಹನುಮಂತಯ್ಯನವರ ಜನ್ಮ ದಿನದಂದು ಅವರ ಸ್ಮರಣೆ ಮಾಡಿ ಗೌರವ ಸಲ್ಲಿಸಿದ್ದೇವೆ. ರಾಮನಗರ ಜಿಲ್ಲೆಯವರಾದ ಅವರು ಸಂವಿಧಾನ ಜಾರಿಯಾದ ನಂತರ ಮುಖ್ಯಮಂತ್ರಿಯಾದವರು. ಅವರ ಕಾಲದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯ ಮಂತ್ರಿಯಾದವರು. ವಿಧಾನಸೌಧದ ಕಟ್ಟಿಸಿದ್ದು ಅವರು. ಆದರೆ ದುರ್ದೈವ, ಅದನ್ನು ಅವರು ಉದ್ಘಾಟಿಸಲು ಬಿಡಲಿಲ್ಲ ಎಂದರು.

ಮಾದರಿ ಆಡಳಿತ

ಅವರ ಆಡಳಿತ ನಮಗೆಲ್ಲಾ ಮಾದರಿ. ವಿಧಾನಸೌಧದ ಪೂರ್ವದಿಕ್ಕಿನಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಬರೆಸಿದ್ದು, ಜನಸೇವೆಯೇ ಜನಾರ್ಧನ ಸೇವೆ ಎಂದು ಅದರ ಅರ್ಥ. ಬದ್ಧತೆ, ನಿಷ್ಠುರತೆಯಿಂದ ಸರ್ಕಾರದ ಕೆಲಸ ಮಾಡಿದ್ದರು. ಹಳೇ ಮೈಸೂರು ಭಾಗದವರಾದರೂ ವಿಶಾಲ ಕರ್ನಾಟಕವಾಗಬೇಕೆಂದು ಕರ್ನಾಟಕ ಏಕೀಕರಣದಲ್ಲಿ ಭಾಗವಹಿಸಿದ್ದರು. ಅವರ ತತ್ವ ಆದರ್ಶಗಳು ನಮಗೆ ಮಾದರಿ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ