ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಇಡೀ ವಿಶ್ವದ ಸಂವಿಧಾನಗಳ ಅತ್ಯುತ್ತಮ ಸಾರವನ್ನು ಅಂಬೇಡ್ಕರ್ ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು

ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನ

ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು

ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಡಿ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ.
ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ ಎಂದು ವಿವರಿಸಿದರು.

ನರೇಂದ್ರಮೋದಿಯವರ ಮಂತ್ರಿ ಮಂಡಲದಲ್ಲಿ ಇದ್ದುಕೊಂಡೇ ಕೇಂದ್ರ ಸಚಿವ ಆಗಿದ್ದ ಅನಂತಕುಮಾರ ಹೆಗ್ಡೆ, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು” ಎಂದು ಘೋಷಿಸಿದರು. ಈ ಘೋಷಣೆಯನ್ನು ಪ್ರಧಾನಿ ಮೋದಿಯವರಾಗಲೀ, ಅಮಿತ್ ಶಾ ಆಗಲೀ, ಬಿಜೆಪಿಯಾಗಲೀ, RSS ಆಗಲಿ ಖಂಡಿಸಲಿಲ್ಲ. ವಿರೋಧಿಸಲಿಲ್ಲ. ಹೀಗಾಗಿ ಬಿಜೆಪಿ ಮತ್ತು ಆರ್‍‌ ಎಸ್‌ ಎಸ್‌ ನ ಅಜೆಂಡಾವನ್ನು, ಉದ್ಸೇಶವನ್ನು ಅನಂತಕುಮಾರ ಹೆಗ್ಡೆ ಬಾಯಲ್ಲಿ ಹೇಳಿಸಿದರು. ಈ ಬಗ್ಗೆ ಇಡಿ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದರು.

ಈ ದೇಶದ, ನಮ್ಮ ನಾಡಿನ ದುಡಿಯುವವರ ಹಕ್ಕುಗಳು, ಶ್ರಮಿಕರು, ರೈತರು, ಕಾರ್ಮಿಕರು ಮತ್ತು ಮಹಿಳಾ ಸಮುದಾಯದ ಅಸ್ತಿತ್ವ ಅಡಗಿರುವುದೇ ನಮ್ಮ ಸಂವಿಧಾನದಲ್ಲಿ. ಸಂವಿಧಾನ ಬದಲಾವಣೆಯಿಂದ ಈ ಎಲ್ಲಾ ಸಮುದಾಯಗಳು ಮರಳಿ ಗುಲಾಮಗಿರಿಗೆ ದೂಡಲ್ಪಡುತ್ತಾರೆ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ಶೂದ್ರ, ದಲಿತ ಮತ್ತು ಶ್ರಮಿಕರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿತ್ತು ಎನ್ನುವುದನ್ನು ಸ್ಮರಿಸಿಕೊಳ್ಳಿ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, Iಇಂಡಿಯಾ ಒಕ್ಕೂಟದ ಮುಖಂಡರಾದ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಸಂವಿಧಾನ ರಕ್ಷಣೆ ಮಾಡಬೇಕಾದ ಅನಿವಾರ್ಯತೆ ಕುರಿತು ಜನರನ್ನು ಜಾಗೃತಗೊಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ