ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅರಣ್ಯ ಹುತಾತ್ಮರಿಗೆ ನಮನ : ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
  • ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.

ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ಥಿಯಾಗಲಿ ಎಂದು ಹಾರೈಸಿದರು.

ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮ‌ರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ