ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಿಜೆಪಿ, ಆರ್‍‌ಎಸ್‌ಎಸ್‌ ಪರಿವಾರದ ಒಬ್ಬರಾದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ?: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ, ಆರ್‍‌ಎಸ್‌ಎಸ್‌ ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
  • ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ: ಸಿಎಂ ವ್ಯಂಗ್ಯ

ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಠುರ ಪ್ರಶ್ನೆಗಳನ್ನು ಕೇಳಿದರು.

ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣದ ಹೈಲೈಟ್ಸ್ ಗಳು…

  • ಬಿಜೆಪಿ, ಆರ್‍‌ಎಸ್‌ಎಸ್‌ ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
  • ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ವ್ಯಂಗ್ಯವಾಡಿದರು.
  • ನಮ್ಮ‌ ಸರ್ಕಾರ ಇದ್ದಾಗ ಕೊಟ್ಟ ವಸತಿ ಶಾಲೆ, ಆಸ್ಪತ್ರೆ, ರಸ್ತೆ, ಸೇತುವೆ ಸೇರಿ ಹತ್ತು ಹಲವು ಭಾಗ್ಯಗಳು, ಗ್ಯಾರಂಟಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿವೆ. ಬಿಜೆಪಿಯವರು ಜನರ ಕಲ್ಯಾಣಕ್ಕೆ ಕೊಟ್ಟ ಒಂದೇ ಒಂದು ಕಾರ್ಯಕ್ರಮ ನಿಮ್ಮ ಮನೆ ತಲುಪಿದೆಯಾ ಹೇಳಿ ಎಂದು ಸಿಎಂ ಪ್ರಶ್ನಿಸಿದರು.
  • ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಇಡೀ ದೇಶದ ರೈತರ ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ನಮ್ಮ ರೈತರ 8165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ನನ್ನ ಸರ್ಕಾರ. ಯಡಿಯೂರಪ್ಪ ಅವರಿಗೂ ಸಾಲ ಮನ್ನಾ ಮಾಡಿ ಅಂದರೆ, ನನ್ನ ಬಳಿ ನೋಟು ಪ್ರಿಂಟ್ ಹಾಕುವ ಮೆಷಿನ್ ಇಲ್ಲ ಎಂದು ಉತ್ತರಿಸಿದ್ದರು. ಇದೇ ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದರು.
  • ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವಾರು ಭಾಗ್ಯಗಳನ್ನು ಯಶಸ್ವಿಯಾಗಿ ಕೊಟ್ಟ ರೀತಿಯಲ್ಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ವರ್ಷಕ್ಕೆ 56 ಸಾವಿರ ಕೋಟಿ ವೆಚ್ಚದಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
  • ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿಯವರು, ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದವರು ಓಟು ಕೊಡಿ ಅಂತ ಕೇಳೋಕೆ ನಿಮ್ಮ ಬಳಿಗೆ ಬರ್ತಾರೆ. ನಾನಾ ರೀತಿ ಸುಳ್ಳುಗಳನ್ನು ಹೇಳಿ ಮತ ಕೇಳ್ತಾರೆ. ಅವರಿಂದ ಸಂಡೂರಿನ ಅಭಿವೃದ್ಧಿ ಈ ಹಿಂದೆಯೂ ಆಗಿಲ್ಲ, ಮುಂದೆಯೂ ಆಗಲ್ಲ
  • ಈ.ತುಕಾರಾಮ್ ಸಂಸದರಾಗಿದ್ದಾರೆ. ಇವರ ಪತ್ನಿ ಅನ್ನಪೂರ್ಣಮ್ಮ ಸಂಡೂರಿನ ಶಾಸಕಿ ಆಗ್ತಾರೆ. ಇಬ್ಬರೂ ಸೇರಿ ಸಂಡೂರನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡ್ತಾರೆ.
Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ