ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅಕ್ಕಿ ಆಲೂರಿನಲ್ಲಿರುವ ಎನ್‌.ಡಿ.ಪಿ.ಯು ಕಾಲೇಜು ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದು ಯಾವ ಹಣದಲ್ಲಿ ಎನ್ನುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದರು.

ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಮಾತನಾಡುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ?

ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಬಗ್ಗೆ ಟೀಕಿಸಿರುವ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ, ನಮಗಲ್ಲಎಂದು ತಿರುಗೇಟು ನೀಡಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ