ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು: ಸಿ.ಎಂ ಸಿದ್ದರಾಮಯ್ಯ

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿ.ಎಂ ಕರೆ

ಬೆಂಗಳೂರು ಮೇ 28: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು.

ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿ.ಎಂ ಮಹತ್ವದ ಘೋಷಣೆ

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು.

ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ