ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅಭಿವೃದ್ಧಿ ಕೆಲಸಗಳನ್ನು ಕ್ಷೇತ್ರದ ಜನರ, ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ ಅವರ ಜೊತೆ ಸಂಪರ್ಕದಲ್ಲಿ ಇರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಜು. 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳು

ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗಧಿ ಮಾಡುವ ಕುರಿತು ಚರ್ಚಿಸಲಾಯಿತು.

ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆ, ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿ ಗತಿಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.‌

ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಆಗಿರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಶಾಸಕರುಗಳ ಗಮನ ಸೆಳೆದರು. ಸರ್ಕಾರ ಪ್ರತೀ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಒದಗಿಸಿದ್ದು, ಇದನ್ನು ಕ್ಷೇತ್ರದ ಜನರ, ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ ಅವರ ಫಲಾನುಭವಿಗಳ ಜೊತೆ ಸಂಪರ್ಕದಲ್ಲಿ ಇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಎಲ್ಲಾ ಕೆಡಿಪಿ ಸಭೆಗಳಲ್ಲೂ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು‌ ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು‌ ನಿಧಾನ ಧೋರಣೆ ಬಗ್ಗೆ ಎಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ