ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಗಾಂಧಿ ಭಾರತ ಶತಮಾನೋತ್ಸವ ಸಮಾರೋಪ; ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಸಭೆಯ ಮುಖ್ಯಾಂಶಗಳು

ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು. 

ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು.

ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸುವುದು.

ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆಗಳನ್ನು ಆಯೋಜಿಸಲಾಗುವುದು. ಮಹಾತ್ಮಾ ಗಾಂಧೀಜಿ ಅವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳನ್ನು ಎಲ್ಲಾ ಶಾಲೆಗಳಲ್ಲಿ ಬರೆದು ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು. 

ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ ಮೂರು ನಾಟಕಗಳನ್ನು ನಿರ್ಮಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ. 

ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಇನ್ನೂ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು.

ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶತಮಾನೋತ್ಸವ ಸಮಿತಿಯ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ