ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ
ಬೆಳಗಾವಿ : ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಗಲಿದ ಶಿವಶರಣಪ್ಪಗೌಡ ಪಾಟೀಲ್ ಅವರಿಗೆ ಸಂತಾಪ ಸೂಚಿಸಿದರು.
ಮಾಜಿ ಶಾಸಕ ಶಿವಶರಣಪ್ಪ ಗೌಡ ಪಾಟೀಲ್ ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದವರು. ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1999ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 11ನೇ ವಿಧಾನಸಭೆಗೆ ಚುನಾಯಿತರಾಗಿದ್ದರು. ಕ್ಷೇತ್ರದ ಜನರ ಹಾಗೂ ರೈತರ ಪರವಾಗಿ ಸದಾ ಶ್ರಮಿಸುತ್ತಿದ್ದರು. ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ಒಬ್ಬ ಮುತ್ಸದ್ದಿ ಹಾಗೂ ರೈತರ ಪರ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಸ್ಮರಿಸಿದರು.

