ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.

ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು

ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಮ್ಮ ಮನುಷ್ಯನನ್ನು ದ್ವೇಷಿಸಬಾರದು. ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ. ಕನಕದಾಸರು, ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಬಯಸಿದ್ದರು. ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು ಎಂದರು.

ಗ್ಯಾರಂಟಿಗಳಿಂದ ಜನರ ಆರ್ಥಿಕತೆ ಹೆಚ್ಚುತ್ತದೆ

ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ,ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು, ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ