ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ

ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  • ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನೈತಿಕ ಹಕ್ಕಿಲ್ಲ

ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು.

ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು

ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗ ಅವರು ಅವರ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದ ದೇವೇಗೌಡರು ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು, ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು.

ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಗೆಲ್ಲಲಿದೆ

ಚುನಾವಣೆ ರಣಕಹಳೆ ಮೈಸೂರಿನಿಂದಲೇ ಅಮಿತ್ ಶಾ ಮೊಳಗಿಸುತ್ತಿರುವ ಬಗ್ಗೆ ಮಾತನಾಡಿ ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ