ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಸವತತ್ವವೇ ಶಾಶ್ವತ: ಮುಖ್ಯಮಂತ್ರಿ ಸಿದ್ದರಾಮಯ್ಯ

ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
  • ಮನಸ್ಸು , ದೇಹ ಮತ್ತು ದೇಶದ ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಿ: ಸಿದ್ದರಾಮಯ್ಯ ಕರೆ

ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ “ಯೋಗ ರತ್ನ-2024” ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾದೆ ಎಂದರು.

ಸಮಾಜದ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತುಡಿಯುತ್ತಿರುವ ಸ್ವಾಮೀಜಿಗಳು ಒಟ್ಟಾಗಿ ತಮ್ನನ್ನು ಮತ್ತು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಒಪ್ಪಿ ಆಶೀರ್ವದಿಸಿದಕ್ಕಾಗಿ ಸ್ವಾಮೀಜಿಗಳ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ಅರ್ಪಿಸಿದರು.

ನಿಮ್ಮ ಮನಸ್ಸು , ದೇಹ, ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನದ ಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಬೇಕು. ಇದರಿಂದ ಮನಸ್ಸು, ದೇಹ ಮತ್ತು ದೇಶ ರೋಗ ರಹಿತವಾಗಿ ಸಮಾಜಮುಖಿಯಾಗಿ ಬೆಳೆಯುತ್ತದೆ ಎಂದರು.

ಪರಸ್ಪರ ಮನುಷ್ಯ ಗೌರವ, ಮನುಷ್ಯ ಪ್ರೇಮ ತೋಗ ವಿಜ್ಞಾನದಿಂದ ಬೆಳೆಯುತ್ತದೆ ಎಂದು ಅಭಿಪ್ರಾಯಪಟದಟರು.

ವಚನಾನಂದ ಸ್ವಾಮಿಗಳು, ಇಳಕಲ್ ಮಠದ ಶರಣರು ಸೇರಿ 50 ಮಂದಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್, ಸಂಸದ ಈ.ತುಕಾರಾಂ, ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ