ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್‌ ಅವರ 118ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬೆಂಗಳೂರು: ಡಾ. ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು ಹಾಗೂ ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು  ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತ ದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಮ್‌ ಅವರ 118ನೇ ಜನ್ಮ ದಿನಾಚರಣೆಯ ಅಂಗವಾಗಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬು ಜಗಜೀವನ್ ರಾಮ್‌ ಅವರು ದೇಶ ಕಂಡ ಅಪ್ರತಿಮ ನಾಯಕರು.  ದೀರ್ಘ ಕಾಲ ಕೇಂದ್ರ ಸರ್ಕಾರದ ಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ  ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ  ನಮ್ಮ ವಿಮೋಚನೆಯಿದೆ”  ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು. 

ಕೊಡಗು ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ

ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬಿಜೆಪಿಯವರು  ಹತಾಶರಾಗಿದ್ದಾರೆ

 ಬಿಜೆಪಿಯ ಬೇಡಿಕೆಗೆಲ್ಲಾ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು  ಹತಾಶರಾಗಿದ್ದು, ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ  ಅಭ್ಯಾಸ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡಲಾಗದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ