ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಸಮಾರಂಭ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಂಬೆಸ್ಸಿ ಮಾನ್ಯತಾ ಬಿಸಿನೆಸ್ ಪಾರ್ಕ್ನಲ್ಲಿ ಆರಂಭವಾದ ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಮುಖ್ಯಮಂತ್ರಿಗಳ ಭಾಷಣದ ಪ್ರಮುಖಾಂಶಗಳು ಇಲ್ಲಿವೆ:
- ಕ್ವಾಂಟಮ್ ಇಂಡಿಯಾ ಬೆಂಗಳೂರು – 2025 ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ. ಇದೊಂದು ಮಹತ್ವದ ಅಂತರರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕದ ಮೈಲಿಗಲ್ಲಾಗಿದೆ.
- ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಿರುವ ನೊಬೆಲ್ ಪ್ರಶಸ್ತಿ ಪುರಸ್ಕೃತರು, ವಿಜ್ಞಾನಿಗಳು, ತಜ್ಞರು ಸೇರಿದಂತೆ ಭಾರತ ಮತ್ತು ಅಂತರಾಷ್ಟ್ರೀಯ ಪ್ರತಿನಿಧಿಗಳಿಗೆ ಆತ್ಮೀಯ ಸ್ವಾಗತ ಕೋರುತ್ತೇನೆ.
- ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಐಐಎಸ್ಸಿಯ ಕ್ವಾಂಟಮ್ ಟೆಕ್ನಾಲಜಿ ಇನಿಷಿಯೇಟಿವ್ (ಐಕ್ಯೂಟಿಐ) ಮತ್ತು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಭಾರತದ ಕ್ವಾಂಟಮ್ ಪ್ರಯಾಣದಲ್ಲಿ ಈ ಕಾರ್ಯಕ್ರಮವು ಮಹತ್ವದ ಹೆಜ್ಜೆಯಾಗಿದೆ.
- ನಮ್ಮ ಗುರಿಯು ಈ ವೇದಿಕೆಯನ್ನು ಕ್ವಾಂಟಮ್ ಕ್ಷೇತ್ರದ ಜಾಗತಿಕ ಹಬ್ ಆಗಿಸುವುದಾಗಿದೆ. ಕೊಲಾಬರೇಷನ್, ಇನೋವೇಷನ್ ಮತ್ತು ರಿಯಲ್ ವರ್ಲ್ಡ್ ಕ್ವಾಂಟಮ್ ಅಪ್ಲಿಕೇಶನ್ಗಳನ್ನು ಉತ್ತೇಜಿಸುವುದಾಗಿದೆ.
- ಕರ್ನಾಟಕವು ಸಿದ್ಧವಿದೆ, ಭಾರತವೂ ಸಿದ್ಧವಿದೆ, ಎರಡೂ ಜೊತೆಯಾಗಿ ಕ್ವಾಂಟಮ್ ಯುಗದಲ್ಲಿ ವಿಶ್ವವನ್ನು ಮುನ್ನಡೆಸುತ್ತೇವೆ ಎಂಬುದನ್ನು ನಾನು ಇಂದು ಹೆಮ್ಮೆಯಿಂದ ಘೋಷಿಸುತ್ತೇನೆ.
- ಐಟಿ, ಜೈವಿಕ ತಂತ್ರಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಕರ್ನಾಟಕವು ಪ್ರಬಲವಾಗಿದ್ದು, ದೀರ್ಘಾವದಿಯಿಂದ ಭಾರತದ ತಂತ್ರಜ್ಞಾನ ಮತ್ತು ನಾವಿನ್ಯತೆಯ ರಾಜಧಾನಿಯಾಗಿದೆ. ಜ್ಞಾನದ ಹಬ್ ಆಗಿ ಗುರುತಿಸಿಕೊಂಡಿರುವ ಬೆಂಗಳೂರು ಈ ಶೃಂಗವನ್ನು ಮಾದರಿ ಆತಿಥೇಯ ಕಾರ್ಯಕ್ರಮವನ್ನಾಗಿಸಿದೆ.
- “ಕ್ವಾಂಟಮ್ ಇಕೋಸಿಸ್ಟಮ್ ನಿರ್ಮಾಣ: ಸಮಾಜಕ್ಕೆ ಕ್ಯೂಬಿಟ್” ಎಂಬ ಥೀಮ್, ಕ್ವಾಂಟಮ್ ಸಂಶೋಧನೆಯನ್ನು ಆರೋಗ್ಯ, ರಕ್ಷಣಾ, ಆರ್ಥಿಕ ಮತ್ತು ಆಡಳಿತ ವ್ಯವಸ್ಥೆಗೆ ಪರಿಹಾರಗಳನ್ನು ಕಂಡುಕೊಳ್ಳಲು ನಮಗಿರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
- 2025ನ್ನು ಕ್ವಾಂಟಮ್ನ ಅಂತರರಾಷ್ಟ್ರೀಯ ವರ್ಷ ಎಂದು ವಿಶ್ವದಾದ್ಯಂತ ಆಚರಣೆ ಮಾಡುತ್ತಿರುವ ಈ ಹೊತ್ತಿನಲ್ಲಿ ಕರ್ನಾಟಕದ ಕ್ವಾಂಟಮ್ ವಿಷನ್ 2035ನ್ನು ಘೋಷಿಸಲು ನನಗೆ ಹೆಮ್ಮೆ ಎನಿಸುತ್ತದೆ.
- 20 ಬಿಲಿಯನ್ ಡಾಲರ್ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಾಣ ಮಾಡುವ ಮೂಲಕ ಉದ್ಯೋಗ ಸೃಷ್ಟಿ, ಕೈಗಾರಿಕೆಗಳು ಹಾಗೂ ಸಮಾಜಕ್ಕೆ ಪ್ರಯೋಜನಕಾರಿಯಾದ ಸಂಶೋಧನೆಯನ್ನು ಕೈಗೊಳ್ಳುವುದು ನಮ್ಮ ಗುರಿ.
- ಇದನ್ನು ಸಾಧಿಸಲು ನಾವು ಕರ್ನಾಟಕ ಕ್ವಾಂಟಮ್ ಮಿಷನ್(ಕೆಕ್ಯೂಎಂ) ಆರಂಭಿಸುವ ಮೂಲಕ ಸಂಶೋಧನೆ ಮತ್ತು ಅಭಿವೃದ್ಧಿ, ಕೌಶಲ್ಯ, ಮೂಲಸೌಕರ್ಯ ಮತ್ತು ಸ್ಟಾರ್ಟ್ಅಪ್ಗಳಿಗಾಗಿ ನಾವು 1,000 ಕೋಟಿ ರೂ. ಅನುದಾನವನ್ನು ಕೊಡುತ್ತಿದ್ದೇವೆ.
- ಕ್ವಾಂಟಮ್ ತಂತ್ರಜ್ಞಾನದ ಕಾರ್ಯಪಡೆಯು ನೀತಿ ನಿರೂಪಣೆಗೆ ಮಾರ್ಗದರ್ಶನ ಮಾಡಿದರೆ, ಕ್ವಾಂಟಮ್ ಪಾರ್ಕ್ಗಳು, ಉತ್ಪಾದನಾ ವಲಯಗಳು ಹಾಗೂ ಕ್ಯೂ-ಸಿಟಿ ನಾವಿನ್ಯತೆಯನ್ನು ಪೋಷಿಸುತ್ತವೆ.
- ಬೆಂಗಳೂರುನಲ್ಲಿ ಐಟಿ ಕ್ಷೇತ್ರ ಉತ್ತಂಗಕ್ಕೆ ಏರಿದಂತೆ ಕ್ಯೂ-ಸಿಟಿ, ಸಮಗ್ರವಾದ ಕ್ವಾಂಟಮ್ ಹಬ್ ಭಾರತವನ್ನು ಜಾಗತಿಕ ನಾಯಕನನ್ನಾಗಿಸಲಿದೆ.
- ನಮ್ಮ ಕಾರ್ಯತಂತ್ರವು ಕರ್ನಾಟಕ ನೇತೃತ್ವದ ಭಾರತದ ಕ್ವಾಂಟಮ್ ಕ್ರಾಂತಿಗೆ ಐದು ಪ್ರಮುಖ ಸ್ತಂಭಗಳನ್ನು ಸ್ಥಾಪಿಸುವುದಾಗಿದೆ:
- ಮೊದಲನೆಯದಾಗಿ ಕೌಶಲ್ಯಾಭಿವೃದ್ಧಿ: 20ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಕ್ವಾಂಟಮ್ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಚಯಿಸುತ್ತೇವೆ ಹಾಗೂ ಪ್ರತಿ ವರ್ಷ 150 ಪಿಎಚ್ಡಿ ಫೆಲೋಶಿಪ್ಗಳಿಗೆ ನೆರವು ನೀಡುತ್ತೇವೆ. ಇದರಿಂದ ನಾವೀನ್ಯತೆಗೆ ಉತ್ತೇಜನ ನೀಡುವ ತಜ್ಞರನ್ನು ಹುಟ್ಟುಹಾಕಲಿದೆ.
- ಎರಡನೆಯದಾಗಿ, ಉತ್ಕೃಷ್ಟ ಮಟ್ಟದ ಸಂಶೋಧನೆ ಮತ್ತು ಅಭಿವೃದ್ಧಿ. ಆರೋಗ್ಯ ರಕ್ಷಣೆ, ರಕ್ಷಣಾ ಮತ್ತು ಸೈಬರ್ ಭದ್ರತೆ ವಲಯಗಳ ಅಭಿವೃದ್ಧಿಗಾಗಿ ಅತ್ಯಾಧುನಿಕ ಕ್ವಾಂಟಮ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದು,1,000- ಕ್ಯೂಬಿಟ್ ಪ್ರೊಸೆಸರ್ಗಳನ್ನು ಒಳಗೊಂಡಂತೆ ಮತ್ತು ಪೈಲಟ್ ರಿಯಲ್-ವರ್ಲ್ಡ್ ಅಪ್ಲಿಕೇಷನ್ಗಳನ್ನು ಅಭಿವೃದ್ಧಿ ಪಡಿಸುವ ಗುರಿ ಹೊಂದಿದ್ದೇವೆ.
- ಮೂರನೆಯದಾಗಿ ಮೂಲ ಸೌಕರ್ಯ ಸೃಷ್ಟಿ: ಕರ್ನಾಟಕವು ಭಾರತದ ಪ್ರಥಮ ಕ್ವಾಂಟಮ್ ಹಾರ್ಡ್ವೇರ್ ಪಾರ್ಕ್ ನಿರ್ಮಿಸಲಿದೆ. ಇದರಲ್ಲಿ 4 ನಾವಿನ್ಯತಾ ವಲಯಗಳು ಹಾಗೂ ಕ್ವಾಂಟಮ್ ಘಟಕಗಳ ಸ್ಥಳಿಯ ಉತ್ಪಾದನೆಯನ್ನು ಉತ್ತೇಜಿಸಲು ಮೀಸಲಿಡಲಾದ ಫ್ಯಾಬ್ ಲೈನ್ ಅನ್ನು ಸ್ಥಾಪಿಸಲಿದೆ.
- ನಾಲ್ಕನೆಯದಾಗಿ ಉದ್ಯಮಗಳಿಗೆ ಬೆಂಬಲ: ನೂರಕ್ಕೂ ಹೆಚ್ಚು ಸ್ಟಾರ್ಟಪ್ ಗಳಿಗೆ ಪೋಷಣೆ, ನೂರಕ್ಕೂ ಹೆಚ್ಚು ಪೇಟೆಂಟ್ ಗಳನ್ನು ದಾಖಲಿಸಲು ನೆರವು ನೀಡುವುದು ಮತ್ತು ಸ್ಟಾರ್ಟ್ ಅಪ್ ಗಳ ಬೆಳವಣಿಗೆಗೆ ಸಹಾಯ ಒದಗಿಸಲು ಕ್ವಾಂಟಮ್ ವೆಂಚರ್ ಕ್ಯಾಪಿಟಲ್ ಫಂಡ್ ಅನ್ನು ಪ್ರಾರಂಭಿಸುತ್ತೇವೆ.
- ಅಂತಿಮವಾಗಿ ಜಾಗತಿಕ ಪಾಲುದಾರಿಕೆಗಳು. ಇಂಡಿಯಾ ಕ್ವಾಂಟಮ್ ಸಮಾವೇಶ ಹಾಗೂ ಪ್ರತಿಷ್ಠಿತ ಅಂತರಾಷ್ಟ್ರೀಯ ಸಂಸ್ಥೆಗಳ ಸಹಯೋಗದಂತಹ ಕ್ರಮಗಳಿಂದಾಗಿ ನಾವು ಕರ್ನಾಟಕವನ್ನು ಜಾಗತಿಕ ಕ್ವಾಂಟಮ್ ಕೇಂದ್ರವನ್ನಾಗಿಸುತ್ತೇವೆ.
- 2035ರ ವೇಳೆಗೆ 10,000 ಉನ್ನತ ಕೌಶಲ್ಯವಿರುವ ಉದ್ಯೋಗ ಸೃಷ್ಟಿ ಮತ್ತು ಕರ್ನಾಟಕವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿಯನ್ನಾಗಿ ಸ್ಥಾಪಿಸುವುದು ನಮ್ಮ ಗುರಿ.
- ಸಾಮಾನ್ಯ ನಾಗರಿಕರಿಗೆ ಕ್ವಾಂಟಮ್ ಹೇಗೆ ಪ್ರಯೋಜನಕಾರಿ ಎಂದು ಕೆಲವರು ಕೇಳಬಹುದು.
- ಪ್ರಾರಂಭಿಕ ಹಂತದಲ್ಲಿ ರೋಗಗಳ ಪತ್ತೆಗೆ, ಸುರಕ್ಷಿತ ಸಂವಹನ ಹಾಗೂ ಸ್ಮಾರ್ಟ್ ಕೃಷಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
- ರಾಷ್ಟ್ರೀಯ ಭದ್ರತೆ ಶಿಕ್ಷಣ ಮತ್ತು ಆಡಳಿತವನ್ನು ಬಲಪಡಿಸುತ್ತದೆ.
- ಕ್ವಾಂಟಮ್ ಎನ್ನುವುದು ನಮಗೆ ಕೇವಲ ತಂತ್ರಜ್ಞಾನವಲ್ಲ. ಇದು ಪ್ರಗತಿ, ಘನತೆ ಹಾಗೂ ಅಭಿವೃದ್ಧಿಯನ್ನು ಒಳಗೊಂಡಿದೆ.
- ಕ್ವಾಂಟಮ್ ಕಂಪ್ಯೂಟಿಂಗ್, ಕ್ರಿಪ್ಟೋಗ್ರಫಿ ಹಾಗೂ ಸೆನ್ಸಿಂಗ್ನಲ್ಲಿ ಜಾಗತಿಕವಾಗಿ ರಾಷ್ಟ್ರಗಳು ಸ್ಪರ್ಧೆಗೆ ಇಳಿದಿವೆ. ರಾಷ್ಟ್ರೀಯ ಕ್ವಾಂಟಮ್ ಮಿಷನ್ ಮೂಲಕ ಕರ್ನಾಟಕದ ನಾಯಕತ್ವದಲ್ಲಿ ಭಾರತವು ಮುಂದಡಿಯಿಡುತ್ತಿದೆ.
- ಐಐಎಸ್ಸಿ ಸೇರಿದಂತೆ ಪ್ರತಿಷ್ಠಿತ ಸಂಶೋಧನಾ ಕೇಂದ್ರಗಳು ಹಾಗೂ ಅತ್ಯುತ್ತಮ ಸ್ಟಾರ್ಟ್ಅಪ್ ಇಕೋಸಿಸ್ಟಮ್ ಮೂಲಕ ಕರ್ನಾಟಕವು ಭಾರತದ ಕ್ವಾಂಟಮ್ ಕ್ರಾಂತಿಯನ್ನು ಮುನ್ನಡೆಸಲು ಅನನ್ಯ ಸ್ಥಾನವನ್ನು ಪಡೆದಿದೆ.
- ಇದು ಕೇವಲ ಯೋಜನೆ ಅಲ್ಲ. ಬದಲಿಗೆ ವಿಜ್ಞಾನಿಗಳು, ಉದ್ಯಮಿಗಳು ಮತ್ತು ಯುವಕರಿಗೆ ಕರ್ನಾಟಕದಿಂದ ಕ್ವಾಂಟಮ್ ನಾವೀನ್ಯತೆಗಳನ್ನು ವಿಶ್ವಕ್ಕೆ ಪೂರೈಸುವ ಮೂಲಕ ಸಾಧನೆ ಮಾಡುವ ಮಾರ್ಗವಾಗಿದೆ.
- ಈ ಶೃಂಗವು ಹೊಸ ವಿಚಾರಗಳು, ಪಾಲುದಾರರು ಮತ್ತು ಅನ್ವೇಷಣೆಗಳು ಹೊರ ಹೊಮ್ಮಲು ಸಹಕಾರಿಯಾಗಲಿದೆ. ಭಾರತದ ಉತ್ಕೃಷ್ಟ ಗುಣಮಟ್ಟದ ಕ್ವಾಂಟಮ್ಗೆ ಉತ್ತೇಜನ ನೀಡಲಿದೆ.
- ನಾನು ಉದ್ಯಮಿಗಳಿಗೆ ಕರ್ನಾಟಕದ ಕ್ವಾಂಟಮ್ ಇಕೋಸಿಸ್ಟಮ್ನಲ್ಲಿ ಹೂಡಿಕೆ ಮಾಡುವಂತೆ ಮತ್ತು ನಮ್ಮ ಸಂಸ್ಥೆಗಳೊಂದಿಗೆ ಸಹಯೋಗ ಹೊಂದುವಂತೆ ಒತ್ತಾಯಿಸುತ್ತೇನೆ.
- ನಮ್ಮ ವಿಜ್ಞಾನಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಕ್ವಾಂಟಮ್ ಭವಿಷ್ಯವಾಗಿದೆ ಮತ್ತು ಕರ್ನಾಟಕವು ನಿಮ್ಮ ಮೈದಾನವಾಗಿದೆ.
- ಒಟ್ಟಾಗಿ, ಭಾರತವನ್ನು ಜಾಗತಿಕ ಕ್ವಾಂಟಮ್ ಸೂಪರ್ ಪವರ್ ಆಗಿಸೋಣ.
ಭಾರತದ ನಾವೀನ್ಯತಾ ನಗರವಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಮ್ಮೇಳನವು ಸ್ಫೂರ್ತಿದಾಯಕ ಹಾಗೂ ಫಲಪ್ರದವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾರೈಸಿದರು.

