ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

150 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್‌, ಕಾಲೇಜು ಕಾಮಗಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.

ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.

2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.

51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆಟ್ರ್ಸ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ